ಸ್ಪರ್ಧಾತ್ಮಕ ಪರೀಕ್ಷೆ; ಮೇ 21-22ರಂದು ನಿಷೇಧಾಜ್ಞೆ ಜಾರಿ

Update: 2022-05-20 17:03 GMT

ಮಂಗಳೂರು : ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಪರೀಕ್ಷಾ ಕೇಂದ್ರಗಳಲ್ಲಿ ೨೦೨೨ರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯು ನಡೆಯಲಿರುವ ಕಾರಣ ಮೇ ೨೧ ಹಾಗೂ ೨೨ರಂದು ಬೆಳಗ್ಗೆ ೧೦ರಿಂದ ಮಧ್ಯಾಹ್ನ ೧೨ರವರೆಗೆ ಹಾಗೂ ಮಧ್ಯಾಹ್ನ ೨:೩೦ ರಿಂದ ಸಂಜೆ ೫:೩೦ರವರೆಗೆ ಪರೀಕ್ಷಾ ಕೇಂದ್ರದ ೨೦೦ ಮೀ. ಅಂತರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಆರ್‌ಪಿಸಿ ೧೪೪ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿದೆ ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News