ಭಾರೀ ಮಳೆಯಾಗುವ ಸಾಧ್ಯತೆ: ಕೇರಳದ 9 ಜಿಲ್ಲೆಗಳಲ್ಲಿ ʼಯೆಲ್ಲೋ ಅಲರ್ಟ್ʼ ಘೋಷಣೆ

Update: 2022-05-20 18:37 GMT

ತಿರುವನಂತಪುರ, ಮೇ 20: ಭಾರತ ಹವಾಮಾನ ಇಲಾಖೆ ಶುಕ್ರವಾರ ಕೇರಳದ 9 ಜಿಲ್ಲೆಗಳಲ್ಲಿ ‘‘ಯೆಲ್ಲೋ ಅಲರ್ಟ್’’ ಘೋಷಿಸಿದೆ. ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಎರ್ನಾಕುಳಂ, ಇಡುಕ್ಕಿ, ತ್ರಿಶೂರು, ಮಲಪ್ಪುರಂ ಹಾಗೂ ಕೋಝಿಕ್ಕೋಡ್ ಜಿಲ್ಲೆಗಳ ಅಲ್ಲಲ್ಲಿ ಭಾರೀ ಮಳೆ ಸುರಿಯಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ‘‘ಯೆಲ್ಲೋ ಅಲರ್ಟ್’’ ಘೋಷಿಸಿದೆ. ಕೇರಳ ಹಾಗೂ ಲಕ್ಷದ್ವೀಪದ ಒಂದು ಅಥವಾ ಎರಡು ಸ್ಥಳಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಿಂಚಿನ ಜೊತೆಗೆ ಗುಡುಗಿನಿಂದ ಕೂಡಿದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದರಿಂದ ಕೇರಳದ ನಿರ್ದಿಷ್ಟ ಸ್ಥಳಗಳಲ್ಲಿ ಸಾಮಾ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News