ಬೆಂಗಳೂರು | ಮಳೆ ಅನಾಹುತ ಎದುರಿಸಲು ಎಂಟು ವಲಯಗಳಿಗೆ ಕಾರ್ಯಪಡೆ ರಚನೆ
Update: 2022-05-22 10:32 IST
ಬೆಂಗಳೂರು, ಮೇ 22: ಮಳೆ ಅನಾಹುತ ಮತ್ತು ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಎಂಟು ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ವಲಯಗಳ ಜಂಟಿ ಆಯುಕ್ತರು ಈ ಕಾರ್ಯಪಡೆಯ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಾರೆ. ಕಾರ್ಯಪಡೆ ನೇತೃತ್ವದ ವಿವರ ಇಂತಿದೆ.
* ಆರ್.ಅಶೋಕ್- ದಕ್ಷಿಣ ವಲಯ
* ಡಾ.ಅಶ್ವಥ್ ನಾರಾಯಣ್- ಪೂರ್ವ ವಲಯ
* ವಿ.ಸೋಮಣ್ಣ- ಪಶ್ಚಿಮ ವಲಯ
* ಎಸ್.ಟಿ.ಸೋಮಶೇಖರ್ -ಆರ್.ಆರ್. ನಗರ ವಲಯ
* ಬೈರತಿ ಬಸವರಾಜ್- ಮಹದೇವಪುರ ವಲಯ
* ಗೋಪಾಲಯ್ಯ -ಬೊಮ್ಮನಹಳ್ಳಿ ವಲಯ
* ಮುನಿರತ್ನ -ಯಲಹಂಕ ಮತ್ತು ದಾಸರಹಳ್ಳಿ ವಲಯ