ಉಡುಪಿ; ಮಾಜಿ ನಗರಸಭಾ ಸದಸ್ಯ ಸುರೇಶ್ ಸೇರಿಗಾರ್ ನಿಧನ
Update: 2022-05-22 15:41 GMT
ಉಡುಪಿ, ಮೇ ೨೨: ಉಡುಪಿ ಬೈಲಕರೆಯ ನಿವಾಸಿ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಉಡುಪಿ ನಗರಸಭೆಯ ಮಾಜಿ ಸದಸ್ಯ ಸುರೇಶ್ ಸೇರಿಗಾರ ಬೈಲಕೆರೆ (52) ಅಲ್ಪಕಾಲದ ಅಸೌಖ್ಯದಿಂದ ಮೇ 22ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಉದಯವಾಣಿ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿ, ನಂತರ ದಿನಗಳಲ್ಲಿ ಖಾಸಗಿ ಬಸ್ ನಡೆಸಿಕೊಳ್ಳುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರಿಗೆ ಮಾಜಿ ಶಾಸಕ ಯು.ಆರ್. ಸಭಾಪತಿ, ಜಯ ಶೆಟ್ಟಿ ಬನ್ನಂಜೆ, ಗಣೇಶ್ ರಾಜ್ ಸರಳೇಬೆಟ್ಟು ಸಂತಾಪ ಸೂಚಿಸಿದ್ದಾರೆ.