ರಾಜ್ಯದಲ್ಲೂ ಪೆಟ್ರೋಲ್, ಡೀಸೆಲ್ ದರ ಇಳಿಕೆಗೆ ಕ್ರಮವಹಿಸಿ: ಸಿಎಂ ಬೊಮ್ಮಾಯಿಗೆ ಬಿಎಸ್ವೈ ಮನವಿ
Update: 2022-05-22 18:47 GMT
ಬೆಂಗಳೂರು: 'ದೇಶದ ಜನ ಪೆಟ್ರೋಲ್ , ಡೀಸೆಲ್ ಬೆಲೆ ಜಾಸ್ತಿಯಾಗಿರುವುದರಿಂದ ಸಂಕಷ್ಟಕ್ಕೆ ಒಳಗಾಗಿರಬೇಕಾದರೆ ಬೆಲೆ ಕಡಿಮೆ ಮಾಡಬೇಕೆಂಬ ಮುಂದಾಲೋಚನೆ ಮಾಡಿ ನರೇಂದ್ರ ಮೋದಿಯವರು ಬೆಲೆ ಕಡಿಮೆ ಮಾಡಿದ್ದಾರೆ. ರಾಜ್ಯ ಸರಕಾರ ಕೂಡ ಕಡಿಮೆ ಮಾಡಬೇಕು' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಗಳೂ ಸ್ವಲ್ಪ ಸ್ವಲ್ಪವಾಗಿ ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡಿದ್ರೆ ಜನತೆಗೆ ಇನ್ನೂ ಹೆಚ್ಚಿನ ಅನುಕೂಲ ಆಗುತ್ತೆ. ದರ ಇಳಿಕೆ ಕೆಲಸವನ್ನು ಬೊಮ್ಮಾಯಿ ಸರ್ಕಾರವೂ ಮಾಡಬೇಕೆಂದು ನಾನು ವಿನಂತಿ ಮಾಡಿಕೊಳ್ಳುತ್ತೇನೆ ಎಂದರು.
ಪ್ರಧಾನಿಯವರ ಈ ಐತಿಹಾಸಿಕ ತೀರ್ಮಾನಕ್ಕೆ ಅಭಿನಂದನೆ ತಿಳಿಸುವುದಾಗಿ ಬಿಎಸ್ವೈ ಹೇಳಿದರು.