ಚಾಮರಾಜನಗರ: ರಸ್ತೆ ಅಪಘಾತ; ಓರ್ವ ಮೃತ್ಯು

Update: 2022-05-23 03:33 GMT

ಚಾಮರಾಜನಗರ: ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಲುವನಹಳ್ಳಿ ಬಳಿ ಬೈಕ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಫಘಾತದಲ್ಲಿ ಬೈಕ್ ಹೊಸಮೋಳೆ ಗ್ರಾಮದ ನಿವಾಸಿ ಮಹದೇವಶೆಟ್ಟಿ ಮೃತಪಟ್ಟಿದ್ದು, ಸಹಸವಾರ ನಂಜಶೆಟ್ಟಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಮದುವೆಗೆ ಸಂಬಂಧಿಕರನ್ನು ಆಮಂತ್ರಿಸಲು ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಬೆಂಗಳೂರಿನಿಂದ ಬರುತ್ತಿದ್ದ ಶಾಸಕ ಸಿ. ಪುಟ್ಟರಂಗಶೆಟ್ಟಿ ಅಪಘಾತ ಕಂಡು ಕೊಳ್ಳೇಗಾಲ ಗ್ರಾಮಾಂತರ ಪೋಲಿಸರಿಗೆ ಮಾಹಿತಿ ನೀಡಿ, ಸ್ವತಃ ತನ್ನ ಕಾರಿನಲ್ಲೆ ಗಾಯಾಳುಗಳನ್ನು ಕೊಳ್ಳೇಗಾಲದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾರ್ ಡ್ರೈವಿಂಗ್ ಕಲಿಯುತ್ತಿದ್ದ ಕಾರು ಚಾಲಕಿ ಮೇಘನಾ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News