ಕಾಸರಗೋಡು: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಪರಾರಿ; ಮೂವರು ಪೊಲೀಸರ ಅಮಾನತು

Update: 2022-05-24 03:50 GMT
ಅಮೀರಾಲಿ

ಕಾಸರಗೋಡು: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಪರಾರಿಯಾದ ಘಟನೆಗೆ ಸಂಬಂಧಪಟ್ಟಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಕಣ್ಣೂರು ಸಶಸ್ತ್ರ ಮೀಸಲು ಪಡೆಯ ಎ ಎಸ್ಐ ಸಜೀವನ್, ಜಶೀರ್ ಮತ್ತು ಅರುಣ್ ರನ್ನು ಅಮಾನತುಗೊಳಿಸಿ ಡಿಐಜಿ ರಾಹುಲ್ ಆರ್ ನಾಯರ್ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸೋಮವಾರ ಬೆಳಗ್ಗೆ ವಿದ್ಯಾನಗರ  ಬಿ.ಸಿ.ರೋಡ್ ನಲ್ಲಿ ಘಟನೆ ನಡೆದಿತ್ತು. ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿ ಕಣ್ಣೂರು ಸೆಂಟ್ರಲ್ ಜೈಲಿನಲ್ಲಿದ್ದ ಆಲಂಪಾಡಿಯ ಅಮೀರಾಲಿ (23) ಎಂಬ ಆರೋಪಿಯನ್ನು ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆ ತರುತ್ತಿದ್ದಾಗ ಪೊಲೀಸರ ಗಮನ ಬೇರೆಡೆ ಸೆಳೆದು ಪರಾರಿಯಾಗಿದ್ದಾನೆ. ಆತನಿಗಾಗಿ ಶೋಧ ಮುಂದುವರಿಯುತ್ತಿದ್ದು, ಇನ್ನೂ ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News