×
Ad

ಸ್ಕಿಜೋಫ್ರೇನಿಯಾ ಬ್ರೈನ್‌ಕ್ಯಾನ್ಸರ್ ಎಂಬುದು ದೊಡ್ಡ ಮಿಥ್ಯ: ಡಾ.ಭಂಡಾರಿ

Update: 2022-05-24 17:55 IST

ಉಡುಪಿ : ಸ್ಕಿಜೋಫ್ರೇನಿಯಾ ಬ್ರೈನ್ ಕ್ಯಾನ್ಸರ್ ಎಂಬುದು ಅತ್ಯಂತ ದೊಡ್ಡ ಮಿಥ್ಯ. ದೈಹಿಕ ಕಾಯಿಲೆಯಂತೆಯೇ ಮಾನಸಿಕ ಕಾಯಿಲೆ ಕೂಡ ಚಿಕಿತ್ಸೆಯ ಮೂಲಕವೇ ನಿಯಂತ್ರಣಕ್ಕೆ ಬರುತ್ತದೆ ಎಂಬುದನ್ನು ನಾವು ಅರಿತು ಕೊಳ್ಳ ಬೇಕು ಎಂದು ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸಮೂಹ ಸಂಸ್ಥೆಯ ನಿರ್ದೇಶಕ ಹಾಗೂ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದ್ದಾರೆ.

ಉಡುಪಿ ಜಿಪಂ, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಮುಂಬೈ ಕಮಲ್ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಸ್ಪತ್ರೆಯ ಸಭಾಂಗಣದಲ್ಲಿ ಏರ್ಪಡಿಸಲಾದ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.  

ಸ್ಕಿಜೋಫ್ರೇನಿಯಾ ದೈಹಿಕ ಕಾಯಿಲೆಗಳಂತೆ ರಕ್ತಪರೀಕ್ಷೆ ಗಳಿಂದಾಗಲಿ ಅಥವಾ ಸ್ಕ್ಯಾನಿಂಗ್‌ಗಳಿಂದಾಗಲಿ ಪತ್ತೆ ಹಚ್ಚಲು ಸಾಧ್ಯವಿಲ್ಲ. ಇದನ್ನು ಸೂಕ್ತ ಮಾನಸಿಕ ಸ್ಥಿತಿ ಪರೀಕ್ಷೆಗಳ ಮೂಲಕ ಮಾತ್ರ ತಿಳಿದುಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು.

ಕಾರ್ಯಾಗಾರವನ್ನು ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ, ಸ್ಕಿಜೋಫ್ರೇನಿಯಾದ ಕುರಿತಾಗಿ ಸಮಾಜದಲ್ಲಿ ಇರುವ ಕಳಂಕವನ್ನು ದೂರಮಾಡಿ ರೋಗಿಗೆ ಸೂಕ್ತ ಚಿಕಿತ್ಸೆ ದೊರಕಿಸಿಕೊಡುವ ಮಹತ್ವ ಕಾರ್ಯವನ್ನು ಮಾಡಬೇಕಾಗಿದೆಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಧಿಕಾರಿ ಡಾ ಚಿದಾನಂದ ಸಂಜು, ಜಿಲ್ಲಾಸ್ಪತ್ರೆಯ ಮನೋವೈದ್ಯ ಡಾ.ವಾಸುದೇವ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.ಮನು ಆನಂದ್ ಮಾತನಾಡಿದರು.

ಆಸ್ಪತ್ರೆಯ ಆಡಳಿತಾಧಿಕಾರಿಣಿ ಸೌಜನ್ಯಾ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ದೀಪಶ್ರೀ ಮತ್ತು ಭಾಗ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು ಪದ್ಮಾ ವಂದಿಸಿದರು. ನಂತರ ನರ್ಸಿಂಗ್ ಹಾಗೂ ಮನೋ ವಿಜ್ಞಾನದ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮಾಹಿತಿಯನ್ನು ಹಮ್ಮಿಕೊಳ್ಳಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News