×
Ad

ಬನ್ನೂರು: ತಾಜುಲ್ ಉಲಮಾ ಸುನ್ನಿ ಚಾರಿಟೇಬಲ್ ಟ್ರಸ್ಟ್‌ನಿಂದ ಮದ್ರಸ ಕಿಟ್ ವಿತರಣೆ

Update: 2022-05-25 09:52 IST

ಪುತ್ತೂರು: ತಾಜುಲ್ ಉಲಮಾ ಸುನ್ನಿ ಚಾರಿಟೇಬಲ್ ಟ್ರಸ್ಟ್ ಹಾಗೂ ಎಸ್.ವೈ.ಎಸ್. ಮತ್ತು ಎಸ್ಸೆಸ್ಸೆಫ್ ವತಿಯಿಂದ ಅರ್ಹ ಮದ್ರಸ ವಿದ್ಯಾರ್ಥಿಗಳಿಗೆ ಮದ್ರಸ ಕಿಟ್ ವಿತರಣೆ ಕಾರ್ಯಕ್ರಮ ಬನ್ನೂರು ಸುನ್ನಿ ಸೆಂಟರ್‌ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಜುಲ್ ಉಲಮಾ ಸುನ್ನಿ ಚಾರಿಟೇಬಲ್ ಟ್ರಸ್ಟ್  ಅಧ್ಯಕ್ಷ ಸೈಯದ್ ಆಬಿದ್ ತಂಙಳ್ ವಹಿಸಿದ್ದರು.

ಬನ್ನೂರು ಬದ್ರಿಯಾ ಜುಮಾ ಮಸೀದಿ ಖತೀಬ್  ಸಿರಾಜುದ್ದೀನ್ ಸಖಾಫಿ ಕನ್ಯಾನ ಕಾರ್ಯಕ್ರಮ ಉದ್ಘಾಟಿಸಿದರು.

 ಬನ್ನೂರು  ಎಸ್‌‌.ವೈ.ಎಸ್. ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಮುಸ್ಲಿಯಾರ್,  ಬದ್ರಿಯ ಜುಮಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷ ಇಸ್ಮಾಯೀಲ್ ಹಾಜಿ, ಕಾರ್ಯದರ್ಶಿ  ಅಶ್ರಫ್ ಹಾರಾಡಿ ಉಪಸ್ಥಿತರಿದ್ದರು.

ಸೈಫುಲ್ಲಾ ಸಹದಿ ಬನ್ನೂರು ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News