KPSC ನೇಮಕ ಹುದ್ದೆಗಳ ಭರ್ತಿ: ವೈದ್ಯಕೀಯ ಮಂಡಳಿ ರಚನೆಗೆ ಹೈಕೋರ್ಟ್ ಆದೇಶ

Update: 2022-05-25 14:01 GMT

ಬೆಂಗಳೂರು, ಮೇ 25: ಕೆಪಿಎಸ್‍ಸಿ ಮುಖಾಂತರ ನಡೆಯುವ ಸರಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ ವೈದ್ಯಕೀಯ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ‘ಶಾಶ್ವತ ವೈದ್ಯಕೀಯ ಮಂಡಳಿ ರಚಿಸಿ’ ಎಂದು ಹೈಕೋರ್ಟ್  ರಾಜ್ಯ ಸರಕಾರಕ್ಕೆ ಆದೇಶಿಸಿದೆ. 

ಈ ಸಂಬಂಧ ಹಾಸನದ ಬಿ.ಎನ್.ಶಿವನಂಜೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠ, ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಸರಕಾರಿ ಹುದ್ದೆಗಳನ್ನು ಪಡೆಯುವುದರಿಂದ ವಂಚಿತರಾಗಬಾರದು. 

ಹೀಗಾಗಿ, ರಾಜ್ಯ ಸರಕಾರ ಶಾಶ್ವತವಾದ ವೈದ್ಯಕೀಯ ಮಂಡಳಿಯನ್ನು ರಚನೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಅಲ್ಲದೆ, ಅರ್ಜಿದಾರ ಶಿವನಂಜೇಗೌಡ ಅವರಿಗೆ ಬಣ್ಣದ ದೃಷ್ಟಿದೋಷ ಇಲ್ಲ ಎಂದು ಮಿಂಟೊ ಆಸ್ಪತ್ರೆಯ ವೈದ್ಯರು ವರದಿ ನೀಡಿದ್ದರಿಂದ ಅವರನ್ನು ಮೋಟಾರು ವಾಹನ ಇನ್‍ಸ್ಪೆಕ್ಟರ್ ಹುದ್ದೆಗೆ ಪುನರ್ ಪರಿಗಣಿಸಬೇಕು ಎಂದು ಹೈಕೊರ್ಟ್ ಆದೇಶಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News