ಕಾಳಿದಾಸ ಬಡಾವಣೆಯ ಕಾಮಗಾರಿಯಲ್ಲಿ ಅಕ್ರಮ: ಶಾಸಕ ರವಿಸುಬ್ರಹ್ಮಣ್ಯ ಧೋರಣೆ ಖಂಡಿಸಿ ಎಎಪಿ ಪ್ರತಿಭಟನೆ

Update: 2022-05-25 18:36 GMT

ಬೆಂಗಳೂರು, ಮೇ 25: ನಗರದ ಬಸವನಗುಡಿ ವಿಧಾನಸಭಾ ಕ್ಷೇತ್ರದ ಕಾಳಿದಾಸ ಬಡಾವಣೆಯಲ್ಲಿ 10 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿ ಅಕ್ರಮದ ಕುರಿತಂತೆ ಆಮ್ ಆದ್ಮಿ ಪಕ್ಷದ ಯುವ ಘಟಕದ ಅಧ್ಯಕ್ಷ ಪ್ರಕಾಶ್ ನಾಗರಾಜ್ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ಮಾಡಲಾಯಿತು.

ಸ್ಥಳೀಯ ಶಾಸಕ ರವಿಸುಬ್ರಹ್ಮಣ್ಯ ನಿರ್ಲಕ್ಷ್ಯತನವನ್ನು ವಿರೋಧಿಸಿ ಪಕ್ಷದ ಅನೇಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಯಾವುದೇ ಮುಂಜಾಗ್ರತಾ ಪರಿಕರಗಳನ್ನು ಒದಗಿಸದೆ ಅನ್ಯ ರಾಜ್ಯಗಳ ಕಾರ್ಮಿಕರನ್ನು ಕರೆತಂದು ಅವರ ಜೀವವನ್ನು ಬಲಿ ಕೊಡುತ್ತಿದ್ದಾರೆ ಎಂದು ಪ್ರತಿಭಟನಕಾರರು ಪ್ರತಿಭಟಿಸಿದರು. ಈ ಕಾಮಗಾರಿಯ  ಕ್ರಮಗಳನ್ನು ಕೂಡಲೇ ತನಿಖೆಗೊಳಪಡಿಸಿ, ಬಿಬಿಎಂಪಿ ಎಂಜಿನಿಯರ್‍ಗಳು, ಗುತ್ತಿಗೆದಾರರು ಹಾಗೂ ಪ್ರಭಾವಿ ರಾಜಕಾರಣಿಗಳನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News