ಉದ್ಯಮಿ, ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲಕ ಕಟ್ಟೆ ಗೋಪಾಲಕೃಷ್ಣ ರಾವ್ ಆತ್ಮಹತ್ಯೆ

Update: 2022-05-26 04:25 GMT
ಕಟ್ಟೆ ಗೋಪಾಲಕೃಷ್ಣ ರಾವ್

ಕುಂದಾಪುರ : ಉದ್ಯಮಿ, ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲಕ ಕಟ್ಟೆ ಗೋಪಾಲಕೃಷ್ಣ ರಾವ್ (ಕಟ್ಟೆ ಭೋಜಣ್ಣ) (80) ಗುರುವಾರ ಬೆಳಗ್ಗೆ 6.15ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅವರು ಕೋಟೇಶ್ವರ ಸಮೀಪದ ಕುದ್ರೆಕೆರೆ ಬೆಟ್ಟು ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟೌಟ್ ನಲ್ಲಿ ತನ್ನದೇ ರಿವಾಲ್ವರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 

ಕೋಟ್ಯಾಧಿಪತಿಯಾಗಿರುವ ಕಟ್ಟೆ ಭೋಜಣ್ಣ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲಕರಾಗಿದ್ದರು. ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಕುಂದಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ಸರ್ಕಲ್ ಇನ್ಸ್‌ಪೆಕ್ಟರ್ ಗೋಪಿಕೃಷ್ಣ, ಪಿಎಸ್ಐ ಸದಾಶಿವ ಗವರೋಜಿ ಮೊದಲಾದವರು ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News