'ತಾಂಬೂಲ ಪ್ರಶ್ನೆ’ ಕೇಳಿರುವುದನ್ನು ಅಲ್ಲಗೆಳೆಯುವುದಿಲ್ಲ, ಅದು ಆ ಭಾಗದ ಜನರ ನಂಬಿಕೆ: ಸಚಿವ ಆರಗ ಜ್ಞಾನೇಂದ್ರ

Update: 2022-05-26 06:04 GMT

ತುಮಕೂರು: ‘ದಕ್ಷಿಣ ‌ಕನ್ನಡ ಜಿಲ್ಲೆಯ ಮಳಲಿಯಲ್ಲಿ ಹುಟ್ಟಿಕೊಂಡಿರುವ ವಿವಾದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ‘ತಾಂಬೂಲ ಪ್ರಶ್ನೆ’ ಜನರ ನಂಬಿಕೆಯಾಗಿದ್ದು, ಅದನ್ನು ಅಲ್ಲಗೆಳೆಯುವುದಿಲ್ಲ ಎಂದು ಹೇಳಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ಪೊಲೀಸರು ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದ್ದಾರೆ. ತಾಂಬೂಲ ಪ್ರಶ್ನೆಯನ್ನು ನಾವು ಪ್ರಶ್ನಿಸುವುದಿಲ್ಲ. ಅದು ಅವರ ವೈಯಕ್ತಿಕ ವಿಚಾರ’ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News