ಮಡಿಕೇರಿ: ಜೆಸಿಬಿಯಡಿಗೆ ಸಿಲುಕಿ ಕಾರ್ಮಿಕ ಮೃತ್ಯು

Update: 2022-05-26 12:38 GMT

ಮಡಿಕೇರಿ ಮೇ 26 : ಬ್ರೇಕ್ ವಿಫಲಗೊಂಡು ಹಿಮ್ಮುಖವಾಗಿ ಚಲಿಸಿದ ಜೆಸಿಬಿಯಡಿಗೆ ಸಿಲುಕಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಡಿಕೇರಿಯ ಕೂಟುಹೊಳೆ ಬಳಿ ನಡೆದಿದೆ. ಹಾಸನ ಮೂಲದ ಕಾರ್ಮಿಕ ಸಂತೋಷ್(22) ಮೃತ ದುರ್ದೈವಿಯಾಗಿದ್ದಾರೆ. 

ಜೆಸಿಬಿಯ ಬ್ರೇಕ್ ವಿಫಲಗೊಂಡು ಇಳಿಜಾರಿನಲ್ಲಿ ಹಿಮ್ಮುಖವಾಗಿ ಚಲಿಸಿದೆ. ಈ ಸಂದರ್ಭ ಕಾರ್ಮಿಕ ಸಂತೋಷ್ ಜೆಸಿಬಿಯಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಒಂದು ಕಾಲು ದೇಹದಿಂದ ಬೇರ್ಪಟ್ಟಿದೆ. 

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News