​ಮೇ 27: ಮೊಗರು ಗ್ರಾಮದಲ್ಲಿ ಜಿಲ್ಲಾಧಿಕಾರಿಯ ಗ್ರಾಮ ವಾಸ್ತವ್ಯ

Update: 2022-05-26 15:05 GMT

ಮಂಗಳೂರು : ಸರಕಾರದ ಜನಪರ ಯೋಜನೆಗಳನ್ನು ತಳಮಟದಲ್ಲಿ ಜನಸಾಮಾನರಿಗೆ ನೇರವಾಗಿ ಒದಗಿಸ ಬೇಕೆಂಬ ಸರಕಾರದ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರಕಾರ ಆದೇಶಿಸಿದೆ.

ಅದರಂಯೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮೇ.೨೭ರಂದು ಗುರುಪುರ ಹೋಬಳಿಯ ಗಂಜಿಮಠ ಗ್ರಾಪಂ ವ್ಯಾಪ್ತಿಯ ಮೊಗರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News