ನಿಪ್ಪಾಣಿ: ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಬಲಿ

Update: 2022-05-27 09:23 GMT
ಸಾಂದರ್ಭಿಕ ಚಿತ್ರ

ಬೆಳಗಾವಿ, ಮೇ 27: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸ್ಥವನಿಧಿ ಸಮೀಪದ ಸರ್ವಿಸ್‌ ರಸ್ತೆಯ ಅಮರ್ ಹೋಟೆಲ್ ಎದುರು ಇಂದು ಬೆಳಗ್ಗೆ ಸಂಭವಿಸಿದೆ.

ನಿಪ್ಪಾಣಿಯ ಸಾಯಿಶಂಕರ ನಗರದ ಅದಗೊಂಡ ಬಾಬು ಪಾಟೀಲ (60), ಛಾಯಾ ಅದಗೊಂಡ ಪಾಟೀಲ (55), ಮಹಾರಾಷ್ಟ್ರದ ರಾಧಾ ನಗರದ ಚಂಪಾತಾಯಿ ಬಾಳೆಷಾ ಮಗದುಮ್ಮ (85) ಮತ್ತು ಸದಲಗಾದ ಮಹೇಶ ದೇವಗೊಂಡ ಪಾಟೀಲ (28) ಮೃತಪಟ್ಟವರಾಗಿದ್ದಾರೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News