ಕಲಬುರಗಿ: ದಲಿತ ಯುವಕನ ಹತ್ಯೆ; ಇಬ್ಬರು ಆರೋಪಿಗಳ ಬಂಧನ

Update: 2022-05-27 12:15 GMT
ವಿಜಯಕುಮಾರ್ ಕಾಂಬಳೆ- ಹತ್ಯೆಗೀಡಾದ ಯುವಕ

ಕಲಬುರಗಿ: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಯುವಕ ವಿಜಯಕುಮಾರ್ ಕಾಂಬಳೆ (25) ಹತ್ಯೆ ಮಾಡಿದ ‌ಆರೋಪದ‌ ಮೇರೆಗೆ ವಾಡಿ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ವಾಡಿ ಪಟ್ಟಣದ ನವಾಝ್ ಮತ್ತು ಮುಹಮ್ಮದ್ ಶಹಾಬುದ್ದೀನ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಪ್ರಕರಣದ ವಿವಿರ ವಿಜಯಕುಮಾರ್ ಹಾಗೂ ಶಹಾಬುದ್ದೀನ್‌ನ ತಂಗಿ‌ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ಬಗ್ಗೆ ಶಹಾಬುದ್ದೀನ್ ತಕರಾರು ತೆಗೆದು ಈ ಹಿಂದೆ ವಿಜಯಕುಮಾರ್ ‌ಮೇಲೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಆ ನಂತರವೂ ಮೊಬೈಲ್‌ನಲ್ಲಿ ಮೆಸೇಜ್ ಮಾಡುವುದು ಹಾಗೂ ಭೇಟಿಯಾಗುವುದನ್ನು ಮುಂದುವರಿಸಿದ್ದ ಹಿನ್ನೆಲೆಯಲ್ಲಿ ತನ್ನ ಸ್ನೇಹಿತ ನವಾಝ್ ನೊಂದಿಗೆ ಸೇರಿಕೊಂಡು ಕೊಲೆ ಮಾಡಿದ್ದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ‌ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News