ಪೊಲೀಸರಿಂದ ಕಿರುಕುಳ ಆರೋಪ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

Update: 2022-05-27 13:08 GMT
ಮಂಜುನಾಥ್ ಶಂಕರ್ ಸಿಂದೆ- ಮೃತ ಯುವಕ

ಕಲಬುರಗಿ: ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಹಾಬಾದ ತಾಲೂಕಿನ ಮರತೂರ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್ ಶಂಕರ್ ಸಿಂದೆ (32) ಆತ್ಮಹತ್ಯೆಗೆ ಶರಣಾದ ಯುವಕ. ಮೃತ ಮಂಜುನಾಥ್ ನ ಪತಿಯ ಅಣ್ಣನ ಮಗು ಕಾಣೆಯಾಗಿದ್ದು ಮಗುವನ್ನು  ಮಂಜುನಾಥ್ ತೆಗೆದುಕೊಂಡು ಹೋಗಿರುವುದಾಗಿ ಆರೋಪಿಸಿ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ದೂರಲಾಗಿದೆ.

'ಎರಡು ದಿನ ಪೊಲೀಸ್ ಠಾಣೆಯಲ್ಲಿ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡಿಸಿದ್ದು, ನಾನು ತೆಗೆದುಕೊಂಡು ಹೋಗಿಲ್ಲ ಎಂದು ಹೇಳಿದರೂ ಕೇಳದ ಪೊಲೀಸರು ಇವತ್ತು ಬಿಟ್ಟಿದ್ದೇವೆ, ನಾಳೆ ನಿನ್ನ ಹೆಂಡತಿಯನ್ನೂ ಬಂಧಿಸಿ ಕರೆದುಕೊಂಡು ಬರುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದಾರೆ' ಎಂದು ಮಂಜುನಾಥ್ ಡೆತ್ ನೋಟಿನಲ್ಲಿ ಬರೆದಿದ್ದಾರೆ.

ಮೃತ ಯುವಕ ಕಿರುಕಳ ನೀಡಿದ್ದಾರೆನ್ನಲಾದ ಪೊಲೀಸ್ ಸಿಬ್ಬಂದಿ ಹೆಸರನ್ನು ಕೂಡ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News