ಸಿದ್ದರಾಮಯ್ಯ ದ್ರಾವಿಡರೇ ಅಥವಾ ಆರ್ಯರೇ ಎಂಬುದಕ್ಕೆ ಉತ್ತರ ನೀಡಲಿ: ಬಸವರಾಜ ಬೊಮ್ಮಾಯಿ

Update: 2022-05-28 08:07 GMT

ಬೆಂಗಳೂರು, ಮೇ 28: ವಿರೋಧ ಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ದ್ರಾವಿಡರೇ ಅಥವಾ ಆರ್ಯರೇ ಎಂಬುದಕ್ಕೆ ಮೊದಲು ಉತ್ತರ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.

ಅವರು ಇಂದು ಆರ್.ಟಿ.ನಗರ ನಿವಾಸದ ಎದುರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಆರೆಸ್ಸೆಸ್ ನವರು ಹೊರಗಿನಿಂದ ಬಂದವರು, ನೆಹರೂ ಅವರಿಗೆ ಹೋಲಿಕೆ ಮಾಡಬಾರದು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ನೆಹರೂ ಅವರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ, ಏಕೆಂದರೆ ಚೀನಾ ದೇಶ ಭಾರತ ಗಡಿಯನ್ನು ಆಕ್ರಮಿಸಿದಾಗ ಯಾವುದೇ ಕ್ರಮವನ್ನು ತೆಗೆದುಕೊಳ್ಳದೇ ನೆಹರೂ ಗಡಿಭಾಗವನ್ನು ಬಿಟ್ಟುಕೊಟ್ಟರು. ಆದರೆ ಪ್ರಧಾನಿ ನರೇಂದ್ರ ಮೋದಿ ಚೀನಾ ದೇಶದ ಗಡಿ ಪ್ರದೇಶ ಆಕ್ರಮಿಸಿಕೊಳ್ಳಲು ಬಂದಾಗ ಗಟ್ಟಿಯಾಗಿ ನಿಂತು ಆ ಪ್ರದೇಶವನ್ನು ಉಳಿಸಿಕೊಂಡವರು. ಪಾಕಿಸ್ತಾನದ ಜೊತೆಗೆ ರಾಜಿ ಮಾಡಿಕೊಳ್ಳಲಿಲ್ಲ. ಭಾರತದ ಅಖಂಡತೆ ಹಾಗೂ ಏಕತೆಗೆ ಸಾಧನೆಯನ್ನು ಮಾಡಿದ್ದಾರೆ. ಮೋದಿಯವರು ಭಾರತವನ್ನು ಶಕ್ತಿಶಾಲಿಯಾಗಿ ಮಾಡಿದ್ದಾರೆ. ಹೀಗಾಗಿ ನೆಹರೂ ಅವರೊಂದಿಗೆ ಹೋಲಿಕೆ ಸಾಧ್ಯವೇ ಇಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News