×
Ad

ಎಎಪಿಯಿಂದ ʻಮನೆಮನೆಗೆ ಕೇಜ್ರಿವಾಲ್ ಮಾದರಿʼ ಅಭಿಯಾನ

Update: 2022-05-29 00:15 IST

ಬೆಂಗಳೂರು, ಮೇ 28: ಬಿಬಿಎಂಪಿ ಚುನಾವಣೆಗೆ ಆಮ್ ಆದ್ಮಿ ಪಾರ್ಟಿ ಸಮರೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿದ್ದು, ʻಮನೆಮನೆಗೆ ಕೇಜ್ರಿವಾಲ್ ಮಾದರಿʼ ಅಭಿಯಾನದ ಮೂಲಕ ಪಕ್ಷದ ಸಾಧನೆಗಳನ್ನು ನಗರಕ್ಕೆ ತಲುಪಿಸಲಾಗುತ್ತದೆ ಎಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು

ಶನಿವಾರ ಪ್ರೆಸ್‍ಕ್ಲಬ್ ಆವರಣದಲ್ಲಿ ನಡೆದ ಆಮ್ ಆದ್ಮಿ ಪಾರ್ಟಿಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, “ಭ್ರಷ್ಟಾಚಾರರಹಿತ ಆಡಳಿತ ನೀಡುವ ಆಮ್ ಆದ್ಮಿ ಪಾರ್ಟಿಯಿಂದ ಮಾತ್ರ ನಗರದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಾಧ್ಯ. ಬೆಂಗಳೂರಿನ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಒಳಚರಂಡಿ, ಕಸ ಸಂಗ್ರಹಣಾ ವ್ಯವಸ್ಥೆ, ಬೀದಿ ದೀಪಗಳು, ಪಾದಚಾರಿ ಮಾರ್ಗ ಮುಂತಾದ ಮೂಲಸೌಕರ್ಯಗಳನ್ನು ಆಮ್ ಆದ್ಮಿ ಪಾರ್ಟಿಯು ಉತ್ತಮ ಗುಣಮಟ್ಟದಲ್ಲಿ ಕಲ್ಪಿಸಬಲ್ಲದು.ಶೇ.40 ಹಣವನ್ನು ಕೊಳ್ಳೆ ಹೊಡೆಯುವ ಬಿಜೆಪಿಯಿಂದ ಗುಣಮಟ್ಟದ ಮೂಲಸೌಕರ್ಯ ಸಾಧ್ಯವಿಲ್ಲ” ಎಂದು ಹೇಳಿದರು.

ಪಕ್ಷದ ಮುಖಂಡ ಮೋಹನ್ ದಾಸರಿ ಮಾತನಾಡಿ, “ವಾರ್ಡ್ ಸಮಿತಿಗಳನ್ನು ಸಮರ್ಪಕವಾಗಿ ಜಾರಿಗೆ ತಂದು, ಜನಸ್ನೇಹಿ ಹಾಗೂ ಪಾರದರ್ಶಕ ಆಡಳಿತ ನೀಡುವ ಗುರಿಯನ್ನು ಎಎಪಿ ಇಟ್ಟುಕೊಂಡಿದೆ. ನಗರಕ್ಕಾಗಿ ಪಕ್ಷವು ಕಳೆದ ಹಲವು ವರ್ಷಗಳಿಂದ ಹೋರಾಟಗಳನ್ನು ನಡೆಸಿದೆ. ಇದರಿಂದಾಗಿ ಆಡಳಿತ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿ, ಕಾರ್ಯಕರ್ತರು ಪೊಲೀಸ್ ಕೇಸುಗಳನ್ನು ಎದುರಿಸುತ್ತಿದ್ದಾರೆ. ರಾಜ್ಯ ರಾಜಧಾನಿಯ ಹಿತಕ್ಕಾಗಿ ಪಕ್ಷವು ಎಂತಹ ಸಾಹಸ ಹಾಗೂ ತ್ಯಾಗಕ್ಕೂ ಸಿದ್ಧವಿದೆ” ಎಂದು ಹೇಳಿದರು.

ಎಎಪಿ ಮುಖಂಡ ಜಗದೀಶ್ ವಿ ಸದಂ, ಸುರೇಶ್ ರಾಥೋಡ್, ಬಿ.ಟಿ.ನಾಗಣ್ಣ, ಶಾಂತಲಾ ದಾಮ್ಲೆ, ಉಷಾ ಮೋಹನ್, ಅಶೋಕ್ ಮೃತ್ಯುಂಜಯ , ಮುಂದಲೆ ಫರೀದ್, ಸೀತರಾಮ್ ಗುಂಡಪ್ಪ ,ಕುಶಲ ಸ್ವಾಮಿ,ಅವಶ್ಯಕತೆಗಳ ರಾಜಶೇಖರ್ ದೊಡ್ಡಣ್ಣ, ಜ್ಯೋತಿμï ಕುಮಾರ್  ಮತ್ತಿತರ ನಾಯಕರು, ಹಾಗೂ ಬೆಂಗಳೂರಿನ ಎಲ್ಲ ವಿಧಾನಸಭೆ ಕ್ಷೇತ್ರ ಹಾಗೂ ವಾರ್ಡ್ ಮಟ್ಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

2020ರಲ್ಲಿ ನಡೆಯಬೇಕಾದ ಚುನಾವಣೆಯು ಎರಡು ವರ್ಷ ತಡವಾಗಿ ನಡೆಯುತ್ತಿದೆ. ಕಾರ್ಪೋರೇಟರ್‍ಗಳಿಲ್ಲದ ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡ ರಾಜ್ಯ ಸರಕಾರ ಹಾಗೂ ಶಾಸಕರು ಹಲವು ರೀತಿಯ ಅಕ್ರಮ ನಡೆಸಿದ್ದಾರೆ. ಈ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಕಾರ್ಪೊರೇಟರ್‍ಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿ, ಬಿಬಿಎಂಪಿಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆ ಎಂಬ ವಿಶ್ವಾಸವಿದೆ. ಈ ಮೂಲಕ ಹದಗೆಟ್ಟಿರುವ ಬಿಬಿಎಂಪಿ ಆಡಳಿತವು ಸರಿ ದಾರಿಗೆ ಬರಲಿದೆ.

-ಭಾಸ್ಕರ್ ರಾವ್, ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಎಎಪಿ ಮುಖಂಡ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News