ಬೆಂಗಳೂರು: ಸ್ನೇಹಿತನ ಮೇಲೆಯೇ ಆ್ಯಸಿಡ್ ಎರಚಿದ ವ್ಯಕ್ತಿ!

Update: 2022-05-31 18:23 GMT

ಬೆಂಗಳೂರು, ಮೇ 31: ಮದ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಆ್ಯಸಿಡ್ ಎರಚಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

ಘಟನೆ ಸಂಬಂಧ ಜನತಾ ಅದಖ್(32) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆ್ಯಸಿಡ್ ದಾಳಿಗೊಳಗಾದ ಯುವಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಇಲ್ಲಿನ ಕಬ್ಬನ್‍ಪೇಟೆಯಲ್ಲಿ ಬೆಳ್ಳಿ ಆಭರಣ ತಯಾರು ಮಾಡುವುದು ಹಾಗೂ ಪಾಲಿಶ್ ಮಾಡುವ ಅಂಗಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಇಬ್ಬರು ಸ್ನೇಹಿತರು ಕೆಲಸ ಮಾಡುತ್ತಿದ್ದಾರೆ. ಮೂರು ದಿನಗಳ ಹಿಂದೆ ಮದ್ಯದ ಅಮಲಿನಲ್ಲಿ ಇವರಿಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಜನತಾ ಅದಖ್ ತನ್ನ ಸ್ನೇಹಿತನ ಮೇಲೆ ಡೈಲೂಟೆಡ್ ಸಲುರಿಕ್ ಆ್ಯಸಿಡ್ ಎರಚಿದ್ದಾನೆ ಎಂದು ಹೇಳಲಾಗುತ್ತಿದೆ.

ಆನಂತರ, ಆತನ ಎದೆ ಮತ್ತು ಮುಖದ ಭಾಗಕ್ಕೆ ಗಾಯವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ನಂತರ ಆರೋಪಿ ಪರಾರಿಯಾಗಿದ್ದನು. ಹಲಸೂರು ಗೇಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶೋಧ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News