ಆಯಿಷಾ ಫಿರ್ದೂಸ್, ಸುಮಾ ಬಿ.ಕೆ. ಸೇರಿದಂತೆ 7 ಅಧಿಕಾರಿಗಳು, 30 ಶಿಕ್ಷಣಾಧಿಕಾರಿಗಳ ವರ್ಗಾವಣೆ

Update: 2022-06-01 15:25 GMT

ಬೆಂಗಳೂರು, ಜೂ.1: ರಾಜ್ಯ ಸರಕಾರವು ಶಿಕ್ಷಣ ಇಲಾಖೆಯ 30 ಶಿಕ್ಷಣಾಧಿಕಾರಿಗಳನ್ನು ಹಾಗೂ 7 ವಿವಿಧ ಇಲಾಖೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅಲ್ಪಸಂಖ್ಯಾತ ನಿರ್ದೇಶನಾಲಯದ ಸಹಾಯಕ ನಿರ್ದೇಶಕ ಆಯಿಷಾ ಫಿರ್ದೂಸ್ ಅವರನ್ನು ರಾಜ್ಯ ಯೋಜನಾ ನಿರ್ದೇಶಕರ ಕಚೇರಿಯ ಕಾರ್ಯಕ್ರಮಾಧಿಕಾರಿಯಾಗಿ ಹಾಗೂ ಬೆಂಗಳೂರು ವಿತ್ತೀಯ ಕಾರ್ಯನೀತಿ ಸಂಸ್ಥೆಯ ವಿಶೇಷಾಧಿಕಾರಿ ಸುಮಾ ಬಿ.ಕೆ. ಅವರನ್ನು ಕರ್ನಾಟಕ ಪಠ್ಯ ಪುಸ್ತಕ ಸಂಘದ ಹಿರಿಯ ಸಹಾಯಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.  

ಹೊಳೆಲ್ಕೆರೆಯ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಎಚ್.ಕೆ. ತಾರಾನಾಥ್, ಸಂಡೂರು ತಾಲೂಕು ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿ ಜೆ.ಡಿ. ಗಂಗಾಧರ, ಬಳ್ಳಾರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಆಗಿದ್ದ ಸುರೇಶ್ ಬಾಬು, ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎಲ್.ಡಿ. ಜೋಷಿ ಅವರನ್ನು ಖಾಲಿ ಇದ್ದ ಹಿರಿಯ ಉಪನ್ಯಾಸ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News