ಕಾಂಗ್ರೆಸ್ ನಲ್ಲಿ ಜೈಲುವಾಸ ಮುಗಿಸಿ ಬಂದವರಿಗೆ, ಮೃಗೀಯ ವರ್ತನೆ ತೋರುವವರಿಗೆ ಹುದ್ದೆ: ಬಿಜೆಪಿ
ಬೆಂಗಳೂರು, ಜೂ.2: ತುಮಕೂರಿನಲ್ಲಿ ಶಿಕ್ಷಣ ಸಚಿವರ ಮನೆಗೆ ಎನ್ಎಸ್ಯುಐ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿರುವುದನ್ನು ಖಂಡಿಸಿರುವ ರಾಜ್ಯ ಬಿಜೆಪಿ, ಕಾಂಗ್ರೆಸ್ ನಲ್ಲಿ ಜೈಲುವಾಸ ಮುಗಿಸಿ ಬಂದವರಿಗೆ, ಮೃಗೀಯ ವರ್ತನೆ ತೋರುವವರಿಗೆ ಹುದ್ದೆ ಸಿಗುತ್ತದೆ ಎಂದು 'Koo' ಸಾಮಾಜಿಕ ಮಾಧ್ಯಮದಲ್ಲಿ ವಾಗ್ದಾಳಿ ನಡೆಸಿದೆ
ತುಮಕೂರಿನಲ್ಲಿ ಶಿಕ್ಷಣ ಮಂತ್ರಿಗಳ ಮನೆಗೆ ನುಗ್ಗಿ ದಾಂಧಲೆ ಎಬ್ಬಿಸಿದ ಎನ್ಎಸ್ಯುಐ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಈ ಗಲಭೇಕೋರರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರೇರಣೆಯೇ? ಈ ಮರಿರೌಡಿಗಳು ಕಾಂಗ್ರೆಸ್ ಪಕ್ಷ ಸೇರಿಕೊಂಡರೆ ರಾಜ್ಯದ ಗತಿ ಏನಾಗಬಹುದು? ಎಂದು ಪ್ರಶ್ನಿಸಿರುವ ಬಿಜೆಪಿ, ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ. ಮೃಗಿಯ ವರ್ತನೆಯವರನ್ನು ಕಾಂಗ್ರೆಸ್ ಪಕ್ಷ ಯುವ ಘಟಕಕ್ಕೆ ನೇಮಿಸಿದೆ. ಇವರಿಂದ ಪ್ರೇರಣೆ ಪಡೆದ ಎನ್ಎಸ್ಯುಐ ಸಂಘಟನೆ ಸಚಿವರ ಮನೆಗೆ ನುಗ್ಗಿ ದಾಂಧಲೆ ನಡೆಸಿದೆ. ಯಥಾ ಪಕ್ಷದ ಮುಖ್ಯಸ್ಥ, ತಥಾ ಕಾರ್ಯಕರ್ತ! ಎಂದು ವ್ಯಂಗ್ಯವಾಡಿದೆ.
ಕನಕಪುರದಲ್ಲಿ ಭಯದ ವಾತಾವರಣ ಹುಟ್ಟಿಸಿ, ಅಕ್ರಮ ಹಣದ ವಹಿವಾಟು ನಡೆಸಿ ತಿಹಾರ್ ಜೈಲುವಾಸ ಮುಗಿಸಿ ಬಂದವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿಸಿದರು. ಮಾರಣಾಂತಿಕ ಹಲ್ಲೆ ಮಾಡಿ ಜೈಲುವಾಸ ಮುಗಿಸಿ ಬಂದವರನ್ನು ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿಸಿದರು. ಸಚಿವರ ಮನೆ ಮೇಲೆ ದಾಳಿ ಮಾಡಿದವರಿಗೆ ಯಾವ ಹುದ್ದೆ ತಯಾರಿದೆ? ಎಂದು ಪ್ರಶ್ನಿಸಿದೆ.
Koo Appಕನಕಪುರದಲ್ಲಿ ಭಯದ ವಾತಾವರಣ ಹುಟ್ಟಿಸಿ, ಅಕ್ರಮ ಹಣದ ವಹಿವಾಟು ನಡೆಸಿ ತಿಹಾರ್ ಜೈಲುವಾಸ ಮುಗಿಸಿ ಬಂದವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿಸಿದರು. ಮಾರಣಾಂತಿ ಹಲ್ಲೆ ಮಾಡಿ ಜೈಲು ವಾಸ ಮುಗಿಸಿ ಬಂದವರನ್ನು ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿದರು. ಸಚಿವರ ಮನೆಮೇಲೆ ದಾಳಿ ಮಾಡಿದವರಿಗೆ ಯಾವ ಹುದ್ದೆ ತಯಾರಿದೆ? #ಗೂಂಡಾಕಾಂಗ್ರೆಸ್- BJP KARNATAKA (@BJP4Karnataka) 2 June 2022