ಅಕ್ಷಯ್‌ ಕುಮಾರ್‌ ನಟನೆಯ 'ಸಾಮ್ರಾಟ್‌ ಪೃಥ್ವಿರಾಜ್ʼ ಸಿನಿಮಾಗೆ‌ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ ಆದಿತ್ಯನಾಥ್

Update: 2022-06-02 11:05 GMT

ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್  ನಟನೆಯ  ಸಾಮ್ರಾಟ್ ಪೃಥ್ವಿರಾಜ್ ಚಿತ್ರವು ಜೂನ್ 3 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಬಿಡುಗಡೆಗೆ‌ ಮೊದಲು  ಅಕ್ಷಯ್ ಕುಮಾರ್  ಅವರು  ಗೃಹ ಸಚಿವ ಅಮಿತ್ ಶಾ ಅವರಿಗೆ ವಿಶೇಷ ಪ್ರದರ್ಶನವನ್ನು ಏರ್ಪಡಿಸಿದ್ದರು. ಇದೀಗ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಚಿತ್ರವನ್ನು ವೀಕ್ಷಿಸಿದ್ದು, ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.

ಲಕ್ನೋದಲ್ಲಿ ಅಕ್ಷಯ್ ಮತ್ತು ಮಾನುಷಿ ಚಿಲ್ಲರ್ ಚಿತ್ರದ ವಿಶೇಷ ಪ್ರದರ್ಶನವನ್ನು ಏರ್ಪಡಿಸಿದ್ದರು.

ಆದಿತ್ಯನಾಥ್ ಅವರು ಅಕ್ಷಯ್  ಅಭಿನಯದ  ಸಾಮ್ರಾಟ್ ಪೃಥ್ವಿರಾಜ್ ಬಗ್ಗೆ ಪ್ರಭಾವಿತರಾಗಿದ್ದು ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು., ಭಾರತದ ಶ್ರೀಮಂತ ಸಂಸ್ಕೃತಿಯನ್ನು ತೋರಿಸಿದ್ದಕ್ಕಾಗಿ ನಿರ್ದೇಶಕರು ಹಾಗೂ  ಚಿತ್ರತಂಡವನ್ನು ಅಭಿನಂದಿಸಿದರು.

"ಅಕ್ಷಯ್ ಕುಮಾರ್ ಅವರು ತಮ್ಮ ಚಿತ್ರದಲ್ಲಿ ಭಾರತದ ಇತಿಹಾಸವನ್ನು ಸುಂದರವಾಗಿ ತೋರಿಸಿದ್ದಾರೆ. ಅದಕ್ಕಾಗಿಯೇ ನಾನು ತಂಡವನ್ನು ಅಭಿನಂದಿಸುತ್ತೇನೆ" ಎಂದು ಆದಿತ್ಯನಾಥ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News