ಉಡುಪಿ: ಲಾಡ್ಜ್‌ನಲ್ಲಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ

Update: 2022-06-02 15:39 GMT

ಉಡುಪಿ, ಜೂ.2: ಲಾಡ್ಜ್‌ವೊಂದರಲ್ಲಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬರನ್ನು ಪೊಲೀಸರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿರುವ ಘಟನೆ ಗುರುವಾರ ಸಂಜೆ ಉಡುಪಿ ನಗರದಲ್ಲಿ ನಡೆದಿದೆ.

ರೋಹನ್ ರಾಜೇಶ್ ಜತ್ತನ್ನ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ. ಕೌಟಂಬಿಕ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿದ್ದ ರೋಹನ್ ಉಡುಪಿ ನಗರದ ಖಾಸಗಿ ಲಾಡ್ಜ್ನಲ್ಲಿ ರೂಮ್ ಬುಕ್ ಮಾಡಿದ್ದರು. ಬಳಿಕ ತನ್ನ ಕೈಯನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರೆಂದು ತಿಳಿದುಬಂದಿದೆ.

ಈ ಮಾಹಿತಿಯನ್ನು ರೋಹನ್ ಮಂಗಳೂರಿನ ತನ್ನ ಸ್ನೇಹಿತ ಆದಿತ್ಯ ಎಂಬವರಿಗೆ ಕರೆ ಮಾಡಿ ತಿಳಿಸಿದ್ದರು. ಬಳಿಕ ಆದಿತ್ಯ ಈ ಬಗ್ಗೆ ಮಂಗಳೂರು ಪೊಲೀಸ್ ಕಂಟ್ರೋಲ್ ರೂಮಿಗೆ ಮಾಹಿತಿ ನೀಡಿದರು. ಅಲ್ಲಿಂದ ಉಡುಪಿ ಕಂಟ್ರೋಲ್ ರೂಮಿಗೆ ದೊರೆತ ಮಾಹಿತಿಯಂತೆ ಉಡುಪಿ ನಗರ ಪೊಲೀಸರು ಲಾಡ್ಜ್‌ಗೆ ತೆರಳಿ ರೋಹನ್ರನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಪಡೆ ಯುತ್ತಿರುವ ರೋಹನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News