×
Ad

ಶಿವಮೊಗ್ಗ : ಕಾಲಿಗೆ ಗುಂಡು ಹಾರಿಸಿ ರೌಡಿಶೀಟರ್‌ ನನ್ನು ವಶಕ್ಕೆ ಪಡೆದ ಪೊಲೀಸರು

Update: 2022-06-03 11:23 IST
ಹರ್ಷದ್

ಶಿವಮೊಗ್ಗ : ಚಾಕು ತೋರಿಸಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪದಲ್ಲಿ ರೌಡಿ ಶೀಟರ್‌ ಓರ್ವನ  ಕಾಲಿಗೆ ಗುಂಡು ಹಾರಿಸಿ, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರೌಡಿ ಶೀಟರ್ ಹರ್ಷದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆ ಪ್ರಕರಣದಲ್ಲಿ ಶಿಕ್ಷೆಯಾದರೂ ಸುಪ್ರೀಂಕೋರ್ಟ್​ನಲ್ಲಿ ಜಾಮೀನು ಪಡೆದು ಓಡಾಡುತ್ತಿದ್ದ ಹರ್ಷದ್​​, ಚಾಕು ತೋರಿಸುತ್ತಾ ಜನರನ್ನ ದರೋಡೆ ಮಾಡುವ ಕೃತ್ಯಕ್ಕೆಕೈ ಹಾಕಿದ್ದ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಆತನನ್ನು ಬಂಧಿಸಲು ಹೋಗಿದ್ದರು. ಆ ವೇಳೆ ಪೊಲೀಸರಿಗೆ ಚಾಕು ತೋರಿಸಿ ಹಲ್ಲೆಗೆ ಮುಂದಾಗಿದ್ದು, ಆತ್ಮ ರಕ್ಷಣೆಗಾಗಿ ತುಂಗಾನಗರ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ, ಆತನನ್ನ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದನ್ನು ಗಮನಿಸಿದ ಇನ್​ಸ್ಪೆಕ್ಟರ್​ ಮಂಜುನಾಥ್​ , ಅರ್ಷದ್​ ಕಾಲಿಗೆ ಗುಂಡು ಹಾರಿಸಿ, ಆತನನ್ನ ಹಿಡಿದಿದ್ದಾರೆ. ಬುದ್ಧನಗರ ನಿವಾಸಿಯಾಗಿರುವ ಹರ್ಷದ್​ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಪ್ರಕರಣದಲ್ಲಿ ಆತನಿಗೆ ಶಿಕ್ಷೆಯೂ ಆಗಿತ್ತು. ಸುಪ್ರೀಂ ಕೋರ್ಟ್​ನಲ್ಲಿ ಬೇಲ್​ ತೆಗೆದುಕೊಂಡು ಬಂದಿರುವ ಹರ್ಷದ್​ ಶಿವಮೊಗ್ಗದಲ್ಲಿ ಸುಲಿಗೆ, ದರೋಡೆ, ಬೆದರಿಕೆ ಹಾಕುವ ಕೆಲಸ ಮಾಡುತ್ತಿದ್ದ ಎಂದು‌ ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News