ಜೂ. 7ರಂದು ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಬಿ.ಕೆ. ಹರಿಪ್ರಸಾದ್ ರಿಗೆ ಅಭಿನಂದನಾ ಕಾರ್ಯಕ್ರಮ

Update: 2022-06-04 16:08 GMT

ಮಂಗಳೂರು : ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಜೂ. 7ರಂದು ಪೂರ್ವಾಹ್ನ ಘಂಟೆ 11 ಕ್ಕೆ ಮಂಗಳೂರಿನ ಬೋಳಾರದಲ್ಲಿರುವ ಶಾದಿ ಮಹಲ್ಲಿನಲ್ಲಿ ವಿಧಾನ ‌ಪರಿಷತ್ ವಿಪಕ್ಷ ನಾಯಕ ‌ಬಿ.ಕೆ. ಹರಿಪ್ರಸಾದ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಸಭಾ ವಿರೋಧ ಪಕ್ಷದ ನಾಯಕರಾದ ಯು.ಟಿ. ಖಾದರ್ ಹಾಗೂ ಮಾಜಿ ಶಾಸಕರಾದ ಬಿ.ಎ. ಮೊಯ್ದಿನ್ ಬಾವರವರು ಭಾಗವಹಿಸಲಿದ್ದಾರೆ. ಅಲ್ಲದೇ ಈ ಸಮಾರಂಭದಲ್ಲಿ ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ 5 ಮಂದಿ ಅತ್ಯುತ್ತಮ ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಧನ ವಿತರಣೆ ಮಾಡಲಾಗುವುದೆಂದು ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಅಲ್ ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ತಿಳಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News