ಆಮ್ ಆದ್ಮಿಯ ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಪುನರಾಯ್ಕೆ

Update: 2022-06-05 13:10 GMT

ಬೆಂಗಳೂರು, ಜೂ. 5: ಆಮ್ ಆದ್ಮಿ ಪಾರ್ಟಿಯ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನಾರಚನೆಯಾಗಿದೆ. ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಹಾಗೂ ನಗರಾಧ್ಯಕ್ಷರಾಗಿ ಮೋಹನ್ ದಾಸರಿ ಅವರು ಪುನರಾಯ್ಕೆ ಆಗಿದ್ದಾರೆ ಎಂದು ಪಕ್ಷ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ಹೊಸದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆಯವರು ರಾಜ್ಯ ಪದಾಧಿಕಾರಿಗಳ ತಂಡದ ಪುನಾರಚನೆ ಮಾಡಿದ್ದಾರೆ.

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ವಿಜಯ್ ಶರ್ಮಾರವರನ್ನು ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ಸಂಚಿತ್ ಸಹಾನಿಯವರು ರಾಜ್ಯ ಪ್ರಧಾನ ಕಾರ್ಯದರ್ಶಿ, ಹರಿಹರನ್‍ರವರು ರಾಜ್ಯ ಖಜಾಂಚಿ, ಜಗದೀಶ್.ವಿ ಸದಂ ರಾಜ್ಯ ಮಾಧ್ಯಮ ಉಸ್ತುವಾರಿಯಾಗಿ, ಕೆ. ಮಥಾಯ್‍ರನ್ನು ರಾಜ್ಯವಕ್ತಾರ ಹುದ್ದೆಗೆ ನೇಮಕ ಮಾಡಲಾಗಿದೆ.

ರಾಜ್ಯ ಕಾರ್ಯದರ್ಶಿಗಳಾಗಿ ಎಚ್.ಡಿ.ಬಸವರಾಜು, ಡಾ.ವೆಂಕಟೇಶ್, ಬಿ.ಟಿ.ನಾಗಣ್ಣ, ಲಕ್ಷ್ಮಿಕಾಂತ್ ರಾವ್, ಶಾಂತಲಾ ದಾಮ್ಲೆ ನೇಮಕಗೊಂಡಿದ್ದಾರೆ. ರಾಜ್ಯ ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ದರ್ಶನ್ ಜೈನ್ ಹಾಗೂ ವಿವೇಕಾನಂದ ಅವರನ್ನು ನೇಮಿಸಲಾಗಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News