ಉತ್ತರಪ್ರದೇಶ: ಸಾಮೂಹಿಕ ಅತ್ಯಾಚಾರಕ್ಕೀಡಾದ ದಲಿತ ಬಾಲಕಿಯ ಕತ್ತು ಹಿಸುಕಿ ಕೊಲೆ; ಮರಣೋತ್ತರ ಪರೀಕ್ಷೆಯಲ್ಲಿ ದೃಢ

Update: 2022-06-06 08:33 GMT
Photo: PTI

ಹೊಸದಿಲ್ಲಿ: ಕೆಲವು ದಿನಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ 13 ವರ್ಷದ ದಲಿತ ಬಾಲಕಿಯನ್ನು  ಕತ್ತು ಹಿಸುಕಿ ಕೊಲೆಗೈದಿರುವುದು  ಆಕೆಯ ಮರಣೋತ್ತರ ಪರೀಕ್ಷೆ ವರದಿಯಿಂದ  ದೃಢಪಟ್ಟಿದೆ.

ಪೊಲೀಸರ ಪ್ರಕಾರ ಅವರು ಶನಿವಾರ ಜೂನ್ 4 ರಂದು ಶವಪರೀಕ್ಷೆಯ ವರದಿಯನ್ನು ಸ್ವೀಕರಿಸಿದರು.  ಆದರೆ ಹುಡುಗಿಯ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಅವರು ದೃಢಪಡಿಸಿದರು.

ಪಹಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದ ನಿವಾಸಿಯಾಗಿರುವ ಬಾಲಕಿ ಬುಧವಾರ ರಾತ್ರಿ ತನ್ನ ಕುಟುಂಬದ ಸದಸ್ಯರೊಂದಿಗೆ ತನ್ನ ಮನೆಯ ಹೊರಗೆ ಮಲಗಿದ್ದಾಗ ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದಾಳೆ.

ಇಂಡಿಯಾ ಟುಡೇ ಪ್ರಕಾರ, ಸಂತ್ರಸ್ತೆ ತನ್ನ ಮನೆಯ ಹೊರಗೆ ಮಲಗಿದ್ದಾಗ ಒಬ್ಬ ಯುವಕನು ಅವರ ಮನೆಗೆ ನುಗ್ಗಿ ಹುಡುಗಿಯನ್ನು ಅಪಹರಿಸಿದ್ದಾನೆ. ನಂತರ ಆರೋಪಿಯು ಬಾಲಕಿಯನ್ನು ಸಮೀಪದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ ಬಾಲಕಿ ಪತ್ತೆಯಾಗದ ಕಾರಣ ಮನೆಯವರು ಹುಡುಕಾಡಿದಾಗ ಸಮೀಪದ ಹೊಲದಲ್ಲಿ ಬಿದ್ದಿರುವುದು ಕಂಡು ಬಂದಿದೆ. ಸಂತ್ರಸ್ತೆ ಎರಡೂ ಕೈಗಳನ್ನು ಕಟ್ಟಿ ಹಾಕಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News