ಮಡಿಕೇರಿ: ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಯುವಕ ಸ್ಥಳದಲ್ಲೇ ಮೃತ್ಯು

Update: 2022-06-06 14:05 GMT

ಮಡಿಕೇರಿ ಜೂ.6 : ಇನ್ನೋವಾ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಕೇರಳ ಮೂಲದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಡಿಕೇರಿ ಹೊರ ವಲಯದ ಬೊಯಿಕೇರಿ ಬಳಿ ನಡೆದಿದೆ. 

ಬೈಕ್‍ನ ಹಿಂಬದಿ ಸವಾರನ ಕಾಲು ಮುರಿಯಲ್ಪಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಣ್ಣೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕಣ್ಣೂರಿನ ಮುಹಮ್ಮದ್ ಶಾನಿಲ್(24) ಮೃತ ಯುವಕನಾಗಿದ್ದು, ರಫ್ಶಾದ್(24) ಎಂಬವರ ಕಾಲಿಗೆ ಗಂಭೀರ ಗಾಯವಾಗಿದೆ.

ಕೇರಳ ಕಣ್ಣೂರು ಮೂಲದ ಮುಹಮ್ಮದ್ ಶಾನಿಲ್ ಮತ್ತು ರಫ್ಶಾದ್ ಅವರು ಬೆಂಗಳೂರಿಗೆ ತೆರಳಿದ್ದು, ಅಲ್ಲಿನ ಪ್ರವಾಸ ಮುಗಿಸಿಕೊಂಡು ಜೂ.5ರಂದು ರಾತ್ರಿ ಬೆಂಗಳೂರು-ಮಡಿಕೇರಿ ಮಾರ್ಗವಾಗಿ ಕೇರಳ ಕಣ್ಣೂರಿಗೆ ತೆರಳುತ್ತಿದ್ದರು. ಜೂ.6ರ ಬೆಳಗಿನ ಜಾವ ಮಡಿಕೇರಿ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 275ನ ಸಿಂಕೋನದ ಬಳಿ ಮಡಿಕೇರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಇನ್ನೋವಾ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಮೊಹಮ್ಮದ್ ಶಾನಿಲ್(24) ಸ್ಥಳದಲ್ಲೇ ಸಾವನ್ನಪ್ಪಿದರೆ, ಬೈಕ್‍ನ ಹಿಂಬದಿ ಸವಾರ  ರಫ್ಶಾದ್(24) ಎಂಬವರ ಬಲಕಾಲು ಮುರಿಯಲ್ಪಟ್ಟಿದೆ. 

ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಇನ್ನೋವಾ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳು ರಫ್ಶಾದ್ ಎಂಬವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಣ್ಣೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News