ನಗರಸಭೆ ಸದಸ್ಯ ಪ್ರಶಾಂತ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಬಂಧನ: ಎಸ್ಪಿ ಶ್ರೀನಿವಾಸ್ ಗೌಡ

Update: 2022-06-06 15:01 GMT

ಹಾಸನ: ಜೂ.6: ನಗರಸಭೆ ಸದಸ್ಯರಾದ ಪ್ರಶಾಂತ್ ನಾಗರಾಜು ಕೊಲೆ ಪ್ರಕರಣದಲ್ಲಿ 7 ಮಂದಿ ಆರೋಪಿಗಳಿದ್ದು, ಇವರಲ್ಲಿ ಇಬ್ಬರನ್ನು ಬಂಧಿಸಿ ಉಳಿದವರ ಬಂಧಿಸಲು ಶೋಧ ಕಾರ್ಯ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ,  ಆರೋಪಿಗಳಾದ ವಿಶ್ವ ಮತ್ತು ಸಂತೋಷ್ ಎಂಬುವರೇ ಬಂಧಿತ ಆರೋಪಿಗಳು. ಇವರಿಬ್ಬರು ಸ್ನೇಹಿತನಿಗೆ ಸಹಾಯ ಮಾಡಲು ಕೊಲೆಗೆ ಸಹಕರಿಸಿರುವುದಾಗಿ ತನಿಖೆ ವೇಳೆ ಹೇಳಿಕೆ ನೀಡಿದ್ದಾರೆ. ಘಟನೆ ಸಂಬಂಧ ಪ್ರಮುಖ ಆರೋಪಿ ಸಿಗಬೇಕಾಗಿದ್ದು, ಆತ ಸಿಕ್ಕಿದ ನಂತರವಷ್ಟೇ ಘಟನೆಗೆ ಕಾರಣ ಮತ್ತು ಯಾವ ಉದ್ದೇಶಕ್ಕಾಗಿ ಕೊಲೆ ಆಗಿದೆ ಎಂಬುದು ತಿಳಿದು ಬರಲಿದೆ ಎಂದು ಹೇಳಿದರು. 

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಎನ್. ನಂದಿನಿ ಇತರರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News