ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಶ್ರಮಿಸಬೇಕು: ವಿನಯ ಕುಮಾರ್ ಸೊರಕೆ

Update: 2022-06-06 15:30 GMT

ಪಡುಬಿದ್ರಿ: ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಿಷ್ಠಗೊಳಿಸುವಲ್ಲಿ ಕಾರ್ಯಕರ್ತರು ಕಾರ್ಯ ಪ್ರವೃತರಾಗಬೇಕು. ಮಹಿಳೆಯರಿಗೆ ಮತ್ತು  ಯುವಕರಿಗೆ ಹಚ್ಚಿನ ಅದ್ಯತೆ ನೀಡಿ ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಶ್ರಮವಹಿಸಬೇಕು  ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಹೇಳಿದರು.

ಅವರು ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಹೆಜಮಾಡಿ ಕಾಂಗ್ರೆಸ್ ಕಚೇರಿಯಲ್ಲಿ  ಮುಂಬರುವ ಚುನಾವಣಾ ತಯಾರಿಗಾಗಿ ನಡೆದ  ವಿಶೇಷ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಉಡುಪಿ  ಜಿಲ್ಲಾ ಯುವ ಕಾಂಗ್ರೆಸ್  ಸಮಿತಿ ಯ ನೂತನ  ಪ್ರಧಾನ ಕಾರ್ಯದರ್ಶಿಯಾಗಿ ಅಯ್ಕೆಗೊಂಡ  ಮಹಮ್ಮದ್ ಝಿಯಾನ್‍ ರನ್ನು  ಅಭಿನಂದಸಿ ಗೌರವಿಸಲಾಯಿತು. 

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ಮುಹಮ್ಮದ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಲ್ಫಿ ಡಿ ಕೂಸ್ತಾ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕರ್ಕೇರ, ಉಪಾಧ್ಯಕ್ಷ ಸನಾ ಇಬ್ರಾಹಿಂ  ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಶ್ರೀ ಬಂಗೇರ,  ಕೆ.ಪಿ.ಸಿ.ಸಿ ಕೊರ್ಡೀನೇಟರ್  ಅಬ್ದುಲ್ ಅಜೀಜ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಕ್ ಕೋಟ್ಯಾನ್ ಹೆಜಮಾಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುಭಾಷ್ ಸಾಲ್ಯಾನ್, ಕುಸುಮ ಸಾಲ್ಯಾನ್ ಸದಸ್ಯರಾದ  ಚಂಪಾ, ಫರೀದಾ ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News