ಸಿದ್ದರಾಮಯ್ಯರಿಗೆ ಮಾತನಾಡಲು ಬೇರೆ ವಿಷಯವಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

Update: 2022-06-07 07:44 GMT
ಬಸವರಾಜ ಬೊಮ್ಮಾಯಿ

ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆರೆಸ್ಸೆಸ್ ಬಿಟ್ಟರೆ ಮಾತನಾಡಲು ಬೇರೆ ವಿಷಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ  ಮಾಧ್ಯಮದವರೊಂದಿಗೆ ಮಾತನಾಡಿದರು.

ಕರ್ನಾಟಕದ ಜನತೆ ಎಲ್ಲವನ್ನೂ ಗಮಸುತ್ತಿದ್ದಾರೆ. ಜನರಿಗೆ ರಾಜ್ಯದ ಅಭಿವೃದ್ಧಿ, ಭವಿಷ್ಯದ ಬಗ್ಗೆ  ಮಾತನಾಡಬೇಕು ಎಂದರು.

ನಾಳೆ ಶಾಸಕಾಂಗ ಪಕ್ಷದ ಸಭೆ

ರಾಜ್ಯ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ನಾಳೆ ಸಂಜೆ ಕರೆಯಲಾಗುವುದು ಎಂದು ಸಿಎಂ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News