ಚಾರ್ಮಾಡಿ; ರಸ್ತೆ ಅಪಘಾತಕ್ಕೆ ಬೈಕ್‌ ಸವಾರ ಬಲಿ

Update: 2022-06-08 02:22 GMT

ಬೆಳ್ತಂಗಡಿ : ಎರಡು ಬೈಕುಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಬೈಕ್‌ ಸವಾರನೋರ್ವನ ಮೇಲೆ ಹಿಂದಿನಿಂದ ಬರುತ್ತಿದ್ದ ಲಾರಿ ಹರಿದು ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಪೇಟೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಚಾರ್ಮಾಡಿ ಗ್ರಾಮದ  ಮೇಗಿನ ಪೇಟೆ ನಿವಾಸಿ ಇ‌ಸ್ಮಾಯಿಲ್ ಎಂಬವರ ಪುತ್ರ ನಝೀರ್ (25) ಮೃತರು ಎಂದು ಗುರುತಿಸಲಾಗಿದೆ. ಅವರು ಕೆಲಸ‌ ಮುಗಿಸಿ ಮನೆಗೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನೊಂದು ಬೈಕ್‌ ಸವಾರ ಗಂಭೀರ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News