×
Ad

ಕಲ್ಲಡ್ಕ | ರಸ್ತೆ ಬದಿ ನಿಲ್ಲಿಸಿದ್ದ ಟೆಂಪೋಗೆ ಕಾರು ಢಿಕ್ಕಿ: ಸುರಿಬೈಲ್ ನ ಯುವಕ ಮೃತ್ಯು

Update: 2022-06-08 11:16 IST
ಸಾಂದರ್ಭಿಕ ಚಿತ್ರ

ಬಂಟ್ವಾಳ, ಜೂ.8: ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ಮಂಗಳವಾರ ರಿಕ್ಷಾ ಟೆಂಪೋವೊಂದಕ್ಕೆಸಿಮೆಂಟ್ ಸೀಟು ಲೋಡ್ ಮಾಡುತ್ತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಟೆಂಪೋ ಚಾಲಕ ಬುಧವಾರ ಮುಂಜಾವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸುರಿಬೈಲು ನಿವಾಸಿ ನೌಶಾದ್ (28) ಮೃತಪಟ್ಟ ಯುವಕ. ಇವರು ಮಂಗಳವಾರ ಮಧ್ಯಾಹ್ನ ಕಲ್ಲಡ್ಕ ಪೂರ್ಲಿಪ್ಪಾಡಿಯ ಕೆ.ಎನ್. ಬೇಕರಿ ಬಳಿಯ ರಸ್ತೆ  ಬದಿಯಲ್ಲಿ ರಿಕ್ಷಾ ಟೆಂಪೋ ನಿಲ್ಲಿಸಿ ಸಿಮೆಂಟ್ ಸೀಟು ಲೋಡು ಮಾಡುತ್ತಿದ್ದರೆನ್ನಲಾಗಿದೆ. ಈ ವೇಳೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ನೌಶಾದ್ ಅವರಿಗೆ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ನೌಶಾದ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News