ಎಸೆಸೆಲ್ಸಿಯಲ್ಲಿ 625ಕ್ಕೆ 625 ಅಂಕ ಪಡೆದ ದ.ಕ.ಜಿಲ್ಲೆಯ ವಿದ್ಯಾರ್ಥಿಗಳಿಗೆ ಸನ್ಮಾನ

Update: 2022-06-08 11:48 GMT

ಮಂಗಳೂರು : 2021 -22ನೇ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ 18 ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲಾಡಳಿತದ ಪರವಾಗಿ ಗೌರವಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ಬೆಳ್ತಂಗಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ರೋಶನ್, ಸುಳ್ಯ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಸಾತ್ವಿಕ್ ಎಚ್.ಎಸ್., ಬಂಟ್ವಾಳ ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಹೈಸ್ಕೂಲ್‌ನ ಸುಜಯ್ ಬಿ., ಮೂಡುಬಿದಿರೆಯ ಆಳ್ವಾಸ್ ಕನ್ನಡ ಮಾಧ್ಯಮ ಹೈಸ್ಕೂಲ್‌ನ ಇಂದಿರಾ ಅರುಣ್ ನ್ಯಾಮಗೌಡ‌, ಈರಯ್ಯ ಶ್ರೀಶೈಲ, ಕಲೇಶ್ವರ್ ಪುಂಡಲೀಕ ನಾಯ್ಕ, ಶ್ರೇಯ ಆರ್. ಶೆಟ್ಟಿ, ಸುದೇಶ್ ದತ್ತಾತ್ರೇಯ ಕಿಲ್ಲೆದಾರ್, ಪುತ್ತೂರು ವಿವೇಕಾಂದ ಆಂಗ್ಲ ಮಾಧ್ಯಮ ಹೈಸ್ಕೂಲ್‌ನ ಅಭಯ್ ಶರ್ಮಾ ಕೆ., ಅಭುನಾ ಆರ್, ಆತ್ಮೀಯ ಎಂ. ಕಶ್ಯಪ್, ಬಂಟ್ವಾಳದ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಹೈಸ್ಕೂಲ್ ಧನ್ಯಶ್ರೀ, ಬೆಳ್ತಂಗಡಿ ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಹೈಸ್ಕೂಲ್‌ನ ಮಧುಶ್ರೀ, ಮೂಡುಬಿದಿರೆಯ ರೋಟರಿ ಆಂಗ್ಲ ಮಾಧ್ಯಮ ಹೈಸ್ಕೂಲ್‌ನ ಶ್ರೀಜಾ ಹೆಬ್ಬಾರ್, ಸ್ವಸ್ತಿ, ಮುಲ್ಕಿ ಕಿಲ್ಪಾಡಿಯ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದ ವೀಕ್ಷಾ ವಿ. ಶೆಟ್ಟಿ ಹಾಗೂ ವಿ. ಅಕ್ಷತಾ ಕಾಮತ್ ಹಾಗೂ ಮರು ಎಣಿಕೆಯ ಬಳಿಕ 625ಕ್ಕೆ 625 ಅಂಕ ಪಡೆದ ಕಾಟಿಪಳ್ಳ ಇನ್ಫ್ಯಾಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಅಬಿದ್ ಅಲಿ ಅವರನ್ನು ಜಿಲ್ಲಾಧಿಕಾರಿ ಅವರು ಜಿಲ್ಲಾಡಳಿತದ ವತಿಯಿಂದ ಹೂಗುಚ್ಛ ನೀಡಿ ಪ್ರಮಾಣಪತ್ರ ವಿತರಿಸಿ ಸನ್ಮಾನಿಸಿ ಗೌರವಿಸಿದರು.

ಇದೇ ಸಂದರ್ಭ ಸಾಧಕ ವಿದ್ಯಾರ್ಥಿಗಳ ಜೊತೆ ಜಿಲ್ಲಾಧಿಕಾರಿ ರಾಜೇಂದ್ರ ಅವರು ಪರೀಕ್ಷೆಯ ಅನುಭವಗಳು ಮತ್ತು ಭವಿಷ್ಯದ ಕನಸುಗಳ ಕುರಿತು ಚರ್ಚೆ ನಡೆಸಿದರು. ಈ ವೇಳೆ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸು ಗಳನ್ನು ಜಿಲ್ಲಾಧಿಕಾರಿಯೊಂದಿಗೆ ಹಂಚಿಕೊಂಡರು.

ಈ ಸಂದರ್ಭ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಾಧಕ ವಿದ್ಯಾರ್ಥಿಗಳ ಶಾಲೆಗಳ ಪ್ರಾಂಶುಪಾಲರು, ವಿದ್ಯಾರ್ಥಿ ಗಳ ಪೋಷಕರು ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News