ಕಾರವಾರ; ದಾಖಲೆಗಳಿಲ್ಲದೇ 2 ಕೋಟಿ ರೂ. ಸಾಗಣೆ: ಆರೋಪಿ ಸೆರೆ

Update: 2022-06-09 04:50 GMT

ಕಾರವಾರ: ದಾಖಲೆಗಳಿಲ್ಲದೇ 2 ಕೋಟಿ ರೂ. ನಗದು ಸಾಗಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಿರವಾಡ ರೈಲು ನಿಲ್ದಾಣದಲ್ಲಿ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ಮನೋಹರ ಸಿಂಗ್ ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈತ ಮುಂಬೈನಿಂದ ಮಂಗಳೂರಿಗೆ 2 ಕೋಟಿ ರೂ. ನಗದು ಸಾಗಿಸುತ್ತಿದ್ದ ಎಂದು ಹೇಳಲಾಗಿದ್ದು, ಆರ್ ಪಿಎಫ್ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದ ಸಂದರ್ಭ ಈ ಹಣ ಪತ್ತೆಯಾಗಿದೆ. ಸೂಕ್ತ ದಾಖಲೆ ಇಲ್ಲದ ಕಾರಣ ಹಣ ವಶಕ್ಕೆ ಪಡೆಯಲಾಗಿದೆ. ಕಾರವಾರ ಗ್ರಾಮೀಣ ಪೊಲೀಸ್ ಠಾಣೆಗೆ ಹಣ ಹಾಗೂ ಆತನನ್ನು ಹಸ್ತಾಂತರಿಸಲಾಗಿದೆ. ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಎರಡು ಸಾವಿರ ರೂ.ಗಳ ಹಣದ ಕಂತೆ ಇದೆ. ಆತ ಟಿಕೆಟ್ ತೆಗೆದುಕೊಳ್ಳದೇ ಪ್ರಯಾಣಿಸುತ್ತಿದ್ದುದು ಹಣ ಸಾಗಣೆಯ ಪ್ರಕರಣ ಪತ್ತೆಗೆ ನೆರವಾಗಿದೆ.  ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News