ಅಪಘಾತ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Update: 2022-06-09 16:45 GMT
ಭಟ್ಕಳ: ಕಳೆದ 2017ರಲ್ಲಿ ವಾಹನ ಅಪಘಾತಪಡಿಸಿ ಓರ್ವನ ಸಾವಿಗೆ ಕಾರಣನಾಗಿದ್ದು, ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದ ಆರೋಪಿಯೋರ್ವನನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸಾಗರದ ಜನ್ನತ್ ನಗರದ ನಿವಾಸಿ ಮಹಮ್ಮದ್ ನಯಾಝ್ ಎಂದು ಗುರುತಿಸಲಾಗಿದೆ. ಆರೋಪಿ ಖಾಸಗಿ ಬಸ್ ಚಾಲಕನಾಗಿದ್ದು ವಾಹನ ಅಪಘಾತ ಪಡಿಸಿ ಓರ್ವನ ಸಾವಿಗೆ ಕಾರಣನಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದು ನ್ಯಾಯಾಲಯ ಈತನ ಬಂಧನಕ್ಕೆ ವಾರಂಟ್ ಹೊರಡಿಸಿತ್ತು.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ ದಂಡ ವಿಧಿಸಿ ಜಾಮೀನು ನೀಡಿದೆ.