ರಾಜ್ಯಸಭೆ ಚುನಾವಣೆ; 100ಕ್ಕೆ ನೂರು ನಾವು ಗೆಲ್ಲುತ್ತೇವೆ ಎಂದ ಬಿಎಸ್ ವೈ

Update: 2022-06-10 04:13 GMT

ಬೆಂಗಳೂರು, ಜೂ.10: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಮತದಾನ ಆರಂಭಗೊಂಡಿದ್ದು, ಕೆಲವು  ಶಾಸಕರು ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತ ಚಲಾಯಿಸಿದರು.  

ಇನ್ನು  ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ,  100ಕ್ಕೆ ನೂರು ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

'ನಾವು 4ನೇ ಅಭ್ಯರ್ಥಿಯನ್ನು ಹಾಕಿಲ್ಲ. ಅದು ಅವರಿಗೆ ಬಿಟ್ಟಿದ್ದು, ನಮ್ಮ 3ನೇ ಅಭ್ಯರ್ಥಿ ಲೇಹರ್ ಸಿಂಗ್ ಸೇರಿ ಎಲ್ಲರೂ ಗೆಲ್ಲುತ್ತಾರೆ' ಎಂದಿದ್ದಾರೆ.

ಸಿದ್ದರಾಮಯ್ಯ ಅವರ ಆತ್ಮಸಾಕ್ಷಿಯ ಮತ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಬಿಎಸ್ ವೈ, ಸಿದ್ದರಾಮಯ್ಯ  ದಿನಕ್ಕೆ ಒಂದು ಹೇಳಿಕೆ ಕೊಡುತ್ತಾರೆ. ಅದರಿಂದ ಏನೂ ಉಪಯೋಗ ಇಲ್ಲ.  ನಮ್ಮವರು ನಮಗೆ ಓಟ್​ ಹಾಕುತ್ತಾರೆ ಎಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News