ರಾಜ್ಯಸಭೆ ಚುನಾವಣೆ; ಕಾಂಗ್ರೆಸ್ ಗೆ ಮತ ಹಾಕಿದ ಶಾಸಕ ಶ್ರೀನಿವಾಸ್ ಗೌಡ ಮನೆ ಎದುರು ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Update: 2022-06-10 12:13 GMT

ಕೋಲಾರ : ರಾಜ್ಯ ಸಭೆ ಚುನಾವಣೆಯಲ್ಲಿ ಕಾಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂದು ಹೇಳಿದ್ದ  ಕೋಲಾರ ಜೆಡಿಎಸ್ ಶಾಸಕ  ಶ್ರೀನಿವಾಸ ಗೌಡ ಮನೆ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ನಗರದ ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಶಾಸಕರ ಮನೆ ಎದುರು ಜಮಾಯಿಸಿದ ಜೆಡಿಎಸ್ ಕಾರ್ಯಕರ್ತರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. 

ಪ್ರತಿಭಟನೆ ಸಾಧ್ಯತೆ ಹಿನ್ನೆಯಲ್ಲಿ ಶಾಸಕರ ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News