×
Ad

ಭಟ್ಕಳ: ರಸ್ತೆ ಅಪಘಾತಕ್ಕೆ ಬೈಕ್‌ ಸವಾರ ಬಲಿ

Update: 2022-06-12 20:49 IST

ಭಟ್ಕಳ:  ಬೈಕ್ ಸ್ಕಿಡ್ಡಾಗಿ ಬಿದ್ದು ಹೋಟೆಲ್ ಉದ್ಯಮಿ ಮೃತಪಟ್ಟ ಘಟನೆ ರವಿವಾರ ನಡೆದಿದೆ.

ಮುರ್ಡೇಶ್ವರದ ಗುಮ್ಮನಹಕ್ಕಲ ನಿವಾಸಿ ಹೋಟೆಲ್ ಉದ್ಯಮಿ  ದಿನೇಶ ಈರಪ್ಪ ನಾಯ್ಕ ಮೃತರು ಎಂದು ಗುರುತಿಸಲಾಗಿದೆ.

ಶನಿವಾರ ತಡರಾತ್ರಿ ತನ್ನ ಮೋಟಾರ್ ಬೈಕಿನಲ್ಲಿ ಮುರ್ಡೇಶ್ವರದಿಂದ ಗುಮ್ಮನಹಕ್ಕಲಿನಲ್ಲಿರುವ ತನ್ನ ಮನೆಗೆ ಹೋಗುವಾಗ ಬೈಕ್ ಸ್ಕಿಡ್ಡಾಗಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಅವರು ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News