ಬಾವಿಗೆ ಬಿದ್ದು ಯುವಕ ಮೃತ್ಯು

Update: 2022-06-12 15:38 GMT

ಶಂಕರನಾರಾಯಣ : ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಹಾಲಾಡಿ ಶಂಕರನಾರಾಯಣ ಸಮೀಪ ಇಂದು ನಡೆದಿದೆ.

ಮೃತರನ್ನು ಹಾಲಾಡಿ ನಿವಾಸಿ ಉಮೇಶ್ (೩೫) ಎಂದು ಗುರುತಿಸಲಾಗಿದೆ. ಮನೆ ಕಡೆ ನಡೆದುಕೊಂಡು ಹೋಗುತ್ತಿದ್ದ ಇವರು ಆಕಸ್ಮಿಕವಾಗಿ ಕಾಲುಜಾರಿ ೪೦ ಅಡಿ ಆಳದ ಆವರಣ ಇಲ್ಲದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.

ಮೃತದೇಹ ವನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಸ್ಥಳೀಯರ ಸಹಕಾರದೊಂದಿಗೆ ಮೇಲೆತ್ತಿದ್ದಾರೆ. ಮೃತದೇಹ ೪೦ ಅಡಿ ಆಳದಲ್ಲಿ ಸಿಲುಕಿತ್ತು ಎನ್ನಲಾಗಿದೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News