ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಈಡಿ ಸಮನ್ಸ್; ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

Update: 2022-06-13 08:29 GMT

ಬೆಂಗಳೂರು, ಜೂ. 13: ಕೇಂದ್ರದ ಬಿಜೆಪಿ ಸರಕಾರದ ದ್ವೇಷ ರಾಜಕಾರಣವನ್ನ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಶಾಂತಿನಗರ ಡಬಲ್ ರೋಡ್ ನಲ್ಲಿರುವ 'ಜಾರಿ ನಿರ್ದೇಶನಾಲಯ' (ಈ.ಡಿ.) ಕಚೇರಿ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸುದರು.

ಎಐಸಿಸಿ ಅಧ್ಯಕ್ಷೆ  ಸೋನಿಯಾ ಗಾಂಧಿ ಹಾಗೂ ಎಐಸಿಸಿ ಮುಖಂಡ ರಾಹುಲ್‌ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಪ್ರತಿಭಟನಕಾರರು ಧಿಕ್ಕಾರದ ಘೋಷಣೆ ಕೂಗಿದರು.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹಾರೀಸ್ ನಲಪಾಡ್, ಎಐಸಿಸಿ ಪದಾಧಿಕಾರಿಗಳು, ಪಕ್ಷದ ಶಾಸಕರು ಸೇರಿದಂತೆ ಅನೇಕ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News