ಪಶ್ಚಿಮ ಬಂಗಾಳ: ಪ್ರವಾದಿ ನಿಂದನೆ ವಿರುದ್ಧ ಪ್ರತಿಭಟನೆ; 200ಕ್ಕೂ ಅಧಿಕ ಪ್ರತಿಭಟನಕಾರರ ಬಂಧನ

Update: 2022-06-13 17:17 GMT

ಕೋಲ್ಕತ್ತಾ, ಜೂ. 13: ಪ್ರವಾದಿ ಮುಹಮ್ಮದ್ ವಿರುದ್ಧದ ವಿವಾದಾತ್ಮಕ ಹೇಳಿಕೆ ಕುರಿತಂತೆ ಪ್ರತಿಭಟನೆ ಭುಗಿಲೆದ್ದ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಡಿಜಿಪಿ ಮನೆಜ್ ಮಾಳವೀಯ ಅವರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ರಾಜ್ಯದ ವಿವಿಧ ಭಾಗಗಳಿಂದ 200ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ ಹಾಗೂ 42 ಪ್ರಕರಣಗಳನ್ನು ದಾಖಲಿಸಲಾಗಿದೆ ಅವರು ಹೇಳಿದ್ದಾರೆ.

ಇದುವರೆಗೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮಾಲವಿಯ ಅವರು ಇಲ್ಲಿ ಪಶ್ಚಿಮಬಂಗಾಳ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News