ಪಶ್ಚಿಮ ಬಂಗಾಳದ ವಿವಿಗಳಿಗೆ ರಾಜ್ಯಪಾಲರ ಬದಲಿಗೆ ಮುಖ್ಯಮಂತ್ರಿಯೇ ಕುಲಾಧಿಪತಿ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

Update: 2022-06-13 19:57 GMT

ಕೋಲ್ಕತ್ತಾ: ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಯಾಗಿ ರಾಜ್ಯಪಾಲ ಜಗದೀಪ್ ಧಂಖರ್ ಅವರ ಬದಲಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ನಿಯೋಜಿಸುವ ಮಸೂದೆಯನ್ನು ಪಶ್ಚಿಮ ಬಂಗಾಳ ಸರಕಾರ ಸೋಮವಾರ ಅಂಗೀಕರಿಸಿದೆ.

ಮೇ 26ರಂದು ರಾಜ್ಯ ಸಂಪುಟ ಈ ನಿರ್ಧಾರ ತೆಗೆದುಕೊಂಡಿತ್ತು. ಅದಕ್ಕಿಂತ ಮೊದಲು ಅನುದಾನಿತ ವಿಶ್ವವಿದ್ಯಾನಿಲಯಗಳು ಸೇರಿದಂತೆ ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಯಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ನಿಯೋಜಿಸಲು ಪಶ್ಚಿಮಬಂಗಾಳ ಸಂಪುಟ ನಿರ್ಧಾರವನ್ನು ತೆಗೆದುಕೊಂಡಿತ್ತು.

ರಾಜ್ಯ ವಿಧಾನ ಸಭೆಯಲ್ಲಿ ಈ ಮಸೂದೆಯನ್ನು ಮುಂಗಾರು ಅಧಿವೇಶದನಲ್ಲಿ ಮಂಡಿಸಲಾಗಿತ್ತು. ಜೂನ್ 13ರಂದು ಅಂಗೀಕರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News