ಸಿದ್ದಕಟ್ಟೆ: ಲಾರಿ ಢಿಕ್ಕಿ; ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತ್ಯು
Update: 2022-06-14 12:51 GMT
ಬಂಟ್ವಾಳ, ಜೂ.14: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಸಿದ್ದಕಟ್ಟೆ ಸಮೀಪದ ಸೋರ್ನಾಡು ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ.
ಲೊರೆಟ್ಟೋ ಕಮಲ್ ಕಟ್ಟೆ ನಿವಾಸಿ ಬೈಕ್ ಮೆಕಾನಿಕ್ ನಿತಿನ್ ಮತ್ತು ಪಿಕಪ್ ಚಾಲಕ ಶಶಿರಾಜ್ ಮೃತಪಟ್ಟರು ಎಂದು ತಿಳಿದುಬಂದಿದೆ.
ಬಿ.ಸಿ.ರೋಡಿನಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಬೈಕ್ ಗೆ ಢಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಢಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂ ಆಗಿದ್ದು ಬೈಕಿನಲ್ಲಿದ್ದ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಡಿದ್ದಾರೆ.
ಅಪಘಾತದ ಬಳಿಕ ಲಾರಿ ಚಾಲಕ ಲಾರಿ ನಿಲ್ಲಿಸದೆ ಓಡಿ ಹೋಗಲು ಪ್ರಯತ್ನ ಮಾಡಿದ್ದು, ಸ್ಥಳೀಯರು ಬೆನ್ನಟ್ಟಿ ಸಿದ್ದಕಟ್ಟೆ ಸಮೀಪದ ಕುದ್ಕೋಳಿ ಎಂಬಲ್ಲಿ ಟಿಪ್ಪರ್ ಲಾರಿಯನ್ನು ನಿಲ್ಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.