ಪಡುಬಿದ್ರಿ: ಲಾರಿ ಢಿಕ್ಕಿ; ಪಾದಚಾರಿ ಸಾವು

Update: 2022-06-15 14:30 GMT

ಪಡುಬಿದ್ರಿ: ಅಪಾಯಕಾರಿಯಾಗಿರುವ ಕಾರ್ಕಳ - ಪಡುಬಿದ್ರಿ ಜಂಕ್ಷನ್‍ನಲ್ಲಿ ರಸ್ತೆ ದಾಟಲು ಹೆದ್ದಾರಿ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರ ಮೇಲೆ ಲಾರಿಯ ಚಕ್ರ ಹರಿದು ಮೃತಪಟ್ಟ ಘಟನೆ ಕಾರ್ಕಳ - ಪಡುಬಿದ್ರಿ ಜಂಕ್ಷನ್‍ನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಸಾಂತೂರು ಗ್ರಾಮದ ನಿವಾಸಿ, ಬಡಗಿ ಕೆಲಸ ಮಾಡಿಕೊಳ್ಳುತ್ತಿರುವ ಜಯರಾಮ ಆಚಾರ್ಯ (51) ಎಂದು ಗುರುತಿಸಲಾಗಿದೆ.

ಪಡುಬಿದ್ರಿಯ ಕಾರ್ಕಳ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ-66 ರ ಬದಿಯಲ್ಲಿ ಹೆದ್ದಾರಿ ದಾಟಲು ಕಾಯುತಿದ್ದ ಜಯರಾಮ ಆಚಾರ್ಯ ನಿಂತಿದ್ದಾಗ ಲಾರಿ ಢಿಕ್ಕಿಯಾಗಿದೆ. ತೀವ್ರ ಗಾಯಗೊಂಡ ಅವರನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದರು. ಲಾರಿ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News