ಮಂಡ್ಯ: ಹಾಡಹಗಲೇ ಮಹಿಳೆ ಭೀಕರ ಹತ್ಯೆ

Update: 2022-06-15 14:52 GMT

ಮಂಡ್ಯ, ಜೂ.15: ಹಾಡಹಗಲೇ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಹೋಬಳಿ ಕೇಂದ್ರವಾದ

ಕಿಕ್ಕೇರಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಕಿಕ್ಕೇರಿಯ ಚನ್ನರಾಯಪಟ್ಟಣ ರಸ್ತೆಯಲ್ಲಿರುವ ಶ್ರೀಕಾಂತ್ ಮೆಡಿಕಲ್ ಸ್ಟೋರ್ ಮಾಲಕಿ ಪುಷ್ಪಲತಾ ಕೊಲೆಯಾದವರು.

ದುಷ್ಕರ್ಮಿಗಳು ಅವರ ಮನೆಯಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆಯಿಂದ ಗ್ರಾಮದ ಜನ ಬೆಚ್ಚಿಬಿದ್ದಿದ್ದು, ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News