VIDEO- ಕಾಂಗ್ರೆಸ್ ನಿಂದ ರಾಜಭವನ ಚಲೋ; ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ಪೊಲೀಸ್ ವಶಕ್ಕೆ

Update: 2022-06-16 07:41 GMT

ಬೆಂಗಳೂರು: ರಾಹುಲ್ ಗಾಂಧಿ ಈ.ಡಿ ವಿಚಾರಣೆ ಹಾಗೂ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಸಾಂವಿಧಾನಿಕ ಸಂಸ್ಥೆಗಳು ಹಾಗೂ ಪೋಲಿಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ದ್ವೇಷ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿ  ಕೆಪಿಸಿಸಿ ಕಚೇರಿಯಿಂದ ರಾಜಭವನದ ಕಡೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 

ನಗರದ ಕ್ವೀನ್ಸ್ ರಸ್ತೆಯಲ್ಲಿ ಮರವಣಿಗೆ ಸಾಗುತ್ತಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ , ವಿಧಾನಸಭೆ ವಿರೋಧ ‌ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. 

ಈ ವೇಳೆ  ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಕೈಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News