ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಹೃದಯಾಘಾತ
Update: 2022-06-16 17:50 GMT
ಹೊಸದಿಲ್ಲಿ, ಜೂ. 16: ಸುಪ್ರೀಂ ಕೋರ್ಟ್ನ ನ್ಯಾಯಾಧೀಶ ಎಂ.ಆರ್. ಶಾ ಅವರು ಹಿಮಾಚಲ ಪ್ರದೇಶದಲ್ಲಿ ಗುರುವಾರ ಲಘು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ಕೂಡಲೇ ಏರ್ ಆ್ಯಂಬುಲೆನ್ಸ್ ಮೂಲಕ ದಿಲ್ಲಿಗೆ ತರಲಾಯಿತು.
ಏರ್ ಆ್ಯಂಬುಲೆನ್ಸ್ ದಿಲ್ಲಿಗೆ ತಲುಪಿದ ಕೂಡಲೇ ಶಾ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು.
ಶಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ನಿಯಂತ್ರಣದಲ್ಲಿ ಇದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
ಈ ನಡುವೆ ಸುಪ್ರೀಂ ಕೋರ್ಟ್ ಪ್ರಾಧಿಕಾರ ಈ ವಿಷಯಕ್ಕೆ ಸಂಬಂಧಿಸಿ ಕಾನೂನು ಹಾಗೂ ಗೃಹ ಸಚಿವಾಲಯವನ್ನು ನೇರವಾಗಿ ಸಂಪರ್ಕಿಸಿತು